У нас вы можете посмотреть бесплатно ವಿಬಿ ಜಿ ರಾಮ್ ಜಿ ಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ | ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸೃಜನೆ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವಿಧಾನಸಭೆಯಲ್ಲಿಂದು ಸರ್ಕಾರದ ಅಧಿಕೃತ ನಿರ್ಣಯದ ವಿರುದ್ಧ ಏಕ ಪಕ್ಷೀಯ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ನಿನ್ನೆ ನಿರ್ಣಯವೊಂದನ್ನು ಮಂಡಿಸಿ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಗ್ರಾಮೀಣ ಮಿಷನ್ – ವಿಬಿ ಜಿ ರಾಮ್ ಜಿಯನ್ನು , ಹಿಂಪಡೆದು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸುವ ನಿರ್ಣಯವನ್ನು ಮಂಡಿಸಿದರು. ಆದರೆ ವಿರೋಧ ಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು, ಅಬಕಾರಿ ಇಲಾಖೆಯ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಹೋರಾತ್ರಿ ಧರಣಿ ಮುಂದುವರಿಸಿದರು. ವಿರೋಧ ಪಕ್ಷಗಳ ಧರಣಿಯ ನಡುವೆಯೂ , ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸರ್ಕಾರದ ಅಧಿಕೃತ ನಿರ್ಣಯದ ಮೇಲಿನ ಚರ್ಚೆಗೆ ಅವಕಾಶ ಮಾಡಿಕೊಟ್ಟರು. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಬಿ ಜಿ ರಾಮ್ ಜಿ ಯೋಜನೆಯ ಪರವಾಗಿ ಚರ್ಚೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರ ರೂಪಿಸಿರುವ ಹೊಸ ಯೋಜನೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ. ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಜನೆಯಾಗಲಿದೆ ಎಂದರು. ಆಡಳಿತ ಪಕ್ಷದ ಸದಸ್ಯರಾದ ಕೋನರೆಡ್ಡಿ, ಶರತ್ ಬಚ್ಚೇಗೌಡ, ಕೆ.ಎಂ. ಶಿವಲಿಂಗೇಗೌಡ, ಎಚ್.ಡಿ. ರಂಗನಾಥ್, S.N. ನಾರಾಯಣಸ್ವಾಮಿ, ಬಸವರಾಜ ರಾಯರೆಡ್ಡಿ, ರಿಜ್ವಾನ್ ಹರ್ಷದ್ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿ , ವಿಬಿ ಜಿ ರಾಮ್ ಜಿಯಿಂದ ಅಧಿಕಾರ ವಿಕೇಂದ್ರೀಕರಣದ ಆಶಯಕ್ಕೆ ಧಕ್ಕೆಯಾಗಿದೆ. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನಷ್ಟವಾಗಲಿದೆ ಎಂದು ವ್ಯಾಖ್ಯಾನಿಸಿದರು. ಭೋಜನ ವಿರಾಮದ ಬಳಿಕ ಮತ್ತೆ ಸದನ ಸಮಾವೇಶಗೊಂಡಾಗ , ಕೆ.ಎಂ. ಶಿವಲಿಂಗೇಗೌಡರ ಚರ್ಚೆಯ ಸಂದರ್ಭದಲ್ಲಿ ಅಸಂಸದೀಯ ಪದಗಳನ್ನು ವಿರೋಧ ಪಕ್ಷಗಳ ಸದಸ್ಯರ ವಿರುದ್ಧ ಬಳಕೆ ಮಾಡಲಾಗಿದೆ ಎಂದು, ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತಿತರರು ಆಕ್ಷೇಪ ವ್ಯಕ್ತಪಡಿಸಿದರು. ಶಾಸಕ ಕೆ.ಎಂ. ಶಿವಲಿಂಗೇಗೌಡ ಕ್ಷಮೆ ಕೇಳಬೇಕು. ಅಸಂಸದೀಯ ಪದಗಳನ್ನು ಕಡತದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು. ಚರ್ಚೆಯ ನಡುವೆ ಸಭಾಧ್ಯಕ್ಷರು , ಅಸಂಸದೀಯ ಪದಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ವಿರೋಧ ಪಕ್ಷಗಳ ಸದಸ್ಯರು ಧರಣಿ ಮಾಡುವಾಗ ಮಾತನಾಡುವಂತಿಲ್ಲ. ನಿಮ್ಮ ಆಗ್ರಹ ಇರುವುದು ಅಬಕಾರಿ ಇಲಾಖೆಯ ಹಗರಣದ ಬಗ್ಗೆ. ಅದನ್ನು ಬಿಟ್ಟು ಶಾಸಕ ಶಿವಲಿಂಗೇಗೌಡರ , ವ್ಯಕ್ತಿಗತ ಟೀಕೆ ಮಾಡಿದ್ದು ಸರಿಯಲ್ಲ ಎಂದರು. ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಮತ್ತಿತರರು ಶಿವಲಿಂಗೇಗೌಡ ಅವರ ಬೆಂಬಲಕ್ಕೆ ನಿಂತರು. ಇದರಿಂದ ಗದ್ದಲದ ವಾತಾವರಣ ನಿರ್ಮಾಣವಾಯಿತು. ಆಗ ಸಭಾಧ್ಯಕ್ಷರು ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು. ಮತ್ತೆ ಸದನ ಸಮಾವೇಶಗೊಂಡಾಗ, ಆರ್. ಅಶೋಕ ಅವರು , ಅಸಂಸದೀಯ ಪದಗಳ ಬಳಕೆ ಪರಂಪರೆಯನ್ನು ,, ಆಡಳಿತ ಪಕ್ಷದ ಸದಸ್ಯರು ಆರಂಭಿಸಿದ್ದಾರೆ. ಈ ಕಡತಗಳಿಂದ ಅವುಗಳನ್ನು ತೆಗೆಯುವುದು ಬೇಡ. ಮುಂದೆ ನಾವು ಅದೇ ರೀತಿಯ ಪದಗಳನ್ನು ಬಳಸುತ್ತೇವೆ. ಆಗಲೂ ಸಭಾಧ್ಯಕ್ಷರು ಅದಕ್ಕೆ ಸಮ್ಮತಿ ನೀಡಬೇಕು ಎಂದು ಹೇಳಿದರು. ಸಭಾಧ್ಯಕ್ಷರು ಪರಿಸ್ಥಿತಿ ತಿಳಿಗೊಳಿಸಲು ಎರಡೂ ಕಡೆಗಳಿಂದಲೂ ಕ್ಷಮೆಯಾಚನೆಯಾಗಲಿ ಎಂದು ಸಲಹೆ ನೀಡಿದರು. ವಿರೋಧ ಪಕ್ಷಗಳ ಸದಸ್ಯರ ಧರಣಿಯ ನಡುವೆಯೇ , ಸಭಾಧ್ಯಕ್ಷರು ಶಾಸಕಿ ರೂಪಕಲಾ ಅವರಿಗೆ ಅಧಿಕೃತ ನಿರ್ಣಯದ ಮೇಲೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡಿದರು. #LiveDDChandanaNews #DDChandanaNews #DDChandana #DDKannada