У нас вы можете посмотреть бесплатно ಸಂಸತ್ ನಲ್ಲಿ ಕಾಗದ ರಹಿತ ಆಡಳಿತ ಜಾರಿ ; ಪ್ರಜಾತಂತ್ರ ಸಮಾವೇಶಗಳಲ್ಲಿ ಭಾರತದ ಗೌರವ ಹೆಚ್ಚಳ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಪ್ರಜಾಸತ್ತಾತ್ಮಕ ವ್ಯವಸ್ಥೆ ಬಲಗೊಳಿಸುವಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಡುಗೆ ಅನನ್ಯವಾಗಿದ್ದು, ಸುಗಮ ಕಲಾಪ ನಡೆಸುವಲ್ಲಿ ಶ್ಲಾಘನೀಯ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿಂದು ಹೇಳಿದ್ದಾರೆ. ಸ್ಪೀಕರ್ ವಿರುದ್ಧದ ಅವಿಶ್ವಾಸ ಪ್ರಸ್ತಾವಕ್ಕೆ ಉತ್ತರ ನೀಡಿದ ಅವರು, ಸಂಸತ್ ನಲ್ಲಿ ಕಾಗದ ರಹಿತ ಆಡಳಿತ ಜಾರಿಗೊಳಿಸುವಲ್ಲಿ, ಜಾಗತಿಕ ಸಂಸದೀಯ ಪ್ರಜಾತಂತ್ರ ಸಮಾವೇಶಗಳಲ್ಲಿ ಭಾರತದ ಗೌರವ ಹೆಚ್ಚಿಸುವಲ್ಲಿ ಓಂ ಬಿರ್ಲಾ ಮಹತ್ತರ ಕೊಡುಗೆ ನೀಡಿದ್ದಾರೆ. ಆಡಳಿತ ಹಾಗೂ ವಿರೋಧ ಪಕ್ಷಗಳ ಎಲ್ಲಾ ಸದಸ್ಯರಿಗೆ, ಅನುಭವಿ ಹಾಗೂ ಪ್ರಥಮ ಬಾರಿಯ ಸಂಸದರಿಗೆ ಮಾತನಾಡಲು ಗರಿಷ್ಠ ಅವಕಾಶ ನೀಡಿದ್ದಾರೆ. ಆದರೆ ಸ್ಪೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿರುವುದು ದುರದೃಷ್ಟಕರ ಎಂದರು. 18ನೇ ಲೋಕಸಭೆಯಲ್ಲಿ ಸದನದಲ್ಲಿ ಆಡಳಿತ ಪಕ್ಷದ ಸದಸ್ಯರಿಗೆ 321 ಪೂರಕ ಪ್ರಶ್ನೆಗಳಿಗೆ ಅವಕಾಶ ನೀಡಿದ್ದರೆ, ಪ್ರತಿಪಕ್ಷಗಳ ಸದಸ್ಯರ 364 ಪ್ರಶ್ನೆಗಳಿಗೆ ಅವಕಾಶ ನೀಡಿದ್ದಾರೆ. ಯಾವುದೇ ಪಕ್ಷಪಾತವಿಲ್ಲದೆ ಗಂಭೀರ ವಿಷಯಗಳ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಆದರೆ 40 ವರ್ಷಗಳ ನಂತರ ಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ವ್ಯಕ್ತವಾಗಿರುವುದು ಖಂಡನೀಯ ಎಂದರು. 1987ರಲ್ಲಿ ಅಂದಿನ ಸ್ಪೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದಾಗ ಆಗಿನ ಪ್ರಧಾನಿ ರಾಜೀವ್ ಗಾಂಧಿ ಅವರ ಭಾಷಣ ಪ್ರಸ್ತಾಪಿಸಿದ ಕಿರಣ್ ರಿಜಿಜು, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಾವು ಸದನದಲ್ಲಿ ಮಾತನಾಡಲು ಯಾರ ಅನುಮತಿಯೂ ಬೇಕಿಲ್ಲ ಎಂದು ಹೇಳಿರುವುದು ಖಂಡನೀಯ. ಸದನದಲ್ಲಿ ಪ್ರಧಾನಿ ಸೇರಿದಂತೆ ಯಾರೇ ಮಾತನಾಡಲು ಸ್ಪೀಕರ್ ಅನುಮತಿ ಅತ್ಯಗತ್ಯ ಎಂದರು. ಗೃಹ ಸಚಿವ ಅಮಿತ್ ಶಾ, ಸ್ಪೀಕರ್ ಸ್ಥಾನದ ಬಗ್ಗೆ ತಪ್ಪು ವ್ಯಾಖ್ಯಾನ ಮಾಡಬಾರದು. ಸ್ಪೀಕರ್ ಹುದ್ಧೆ ಅತ್ಯಂತ ಘನತೆಯದಾಗಿದ್ದು, ಸಾಂವಿಧಾನಿಕವಾಗಿದೆ. ಲೋಕಸಭೆ ವಿಸರ್ಜನೆಯಾದ ಸಂದರ್ಭದಲ್ಲಿಯೂ ಸ್ಪೀಕರ್ ಸ್ಥಾನ ಜಾರಿಯಲ್ಲಿರುತ್ತದೆ ಎಂದರು. ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, ಆಡಳಿತ ಮತ್ತು ಪ್ರತಿಪಕ್ಷಗಳ ಎಲ್ಲಾ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಸ್ಪೀಕರ್ ಅವಕಾಶ ನೀಡಬೇಕು. ಆದರೆ, ವಿರೋಧ ಪಕ್ಷದ ನಾಯಕರಿಗೆ ಸಮರ್ಪಕವಾಗಿ ಅವಕಾಶ ನೀಡಿಲ್ಲ. ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸುವ ವೇಳೆ ಪ್ರತಿಪಕ್ಷ ನಾಯಕರ ಭಾಷಣಕ್ಕೆ ಪದೇ ಪದೇ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದರು. #LiveDDChandanaNews #DDChandanaNews #DDChandana #DDKannada