У нас вы можете посмотреть бесплатно ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಭವ್ಯವಾಗಿ ನೆರವೇರಿತು или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಯೂಟ್ಯೂಬ್ ಗೆ 40 ಸೆಕೆಂಡ್ ವಾಯ್ಸ್ ಮಧ್ಯ ಕರ್ನಾಟಕದ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಶುಕ್ರವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಉರಿ ಬಿಸಿಲು, ಗಾಳಿ, ದೂಳು ಯಾವುದನ್ನೂ ಲೆಕ್ಕಿಸದೆ ತಿಪ್ಪೇರುದ್ರಸ್ವಾಮಿಯ ರಥೋತ್ಸವಕ್ಕೆ ಬೆಳಗ್ಗೆಯಿಂದಲೇ ಜನಸಾಗರ ಹರಿದು ಬಂದಿತ್ತು. ನಾಯಕನಹಟ್ಟಿಯ ದೊಡ್ಡ ಕೆರೆ ಕಟ್ಟಿಸಿದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ಪವಾಡಗಳ ಮೂಲಕ ಮಧ್ಯ ಕರ್ನಾಟಕದ ಜನಮನದಲ್ಲಿ ನೆಲೆ ನಿಂತಿದ್ದಾರೆ. ತಿಪ್ಪೇರುದ್ರಸ್ವಾಮಿ ಐಕ್ಯವಾಗಿರುವ ಹೊರಮಠ ಹಾಗೂ ದೇವರ ವಿಗ್ರಹ ಹಾಗೂ ಮುಖ್ಯವಾಗಿರುವ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ನಡೆಯುತ್ತಿದ್ದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಮಧ್ಯಾಹ್ನ 3.45 ಗಂಟೆಯ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ತಿಪ್ಪೇರುದ್ರಸ್ವಾಮಿ ರಥವನ್ನು ರಥ ಬೀದಿಯಿಂದ ಹೊರಮಠದವರೆಗೆ ಎಳೆಯಲಾಯಿತು. ಈ ವೇಳೆ ಸಾಹಸ್ತ್ರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿಭಾವದ ಸಮರ್ಪಣೆ ಅರ್ಪಿಸಿದರು. ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟದ ಹರಾಜು ಪ್ರಕ್ರಿಯೆಯಲ್ಲಿ ಹಲವರು ಭಾಗಿಯಾಗಿದ್ದರು. ಅಂತಿಮವಾಗಿ 32 ಲಕ್ಷ ರೂ ಅಂಜಲಗೆರೆ ಶ್ರೀನಾಥ್ ಮುಕ್ತಿ ಬಾವುಟವನ್ನು ಹರಾಜು ಪ್ರಕ್ರಿಯೆಯಲ್ಲಿ ತಮ್ಮದಾಗಿಸಿಕೊಂಡರು. ನಂತರ ದೊಡ್ಡ ರಥಕ್ಕೆ ಪೂಜಿ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಜಾತ್ರೆಯಲ್ಲಿ ಸಂಸದ ಗೋವಿಂದಕಾರಜೋಳ. ಇತರರು ಭಾಗವಹಿಸಿದ್ದರು. ಜಿಲ್ಲಾಡಳಿತ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದು ಪೋಲಿಸ್ ಇಲಾಖೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತು ವ್ಯವಸ್ಥೆ ಕಲ್ಪಿಸಲಾಗಿತ್ತು.