У нас вы можете посмотреть бесплатно ಎಷ್ಟು ಸಾಹಸವಂತ ನೀನೇ ಬಲವಂತ🙏🚩| ವಿಡಿಯೋ ಪೂರ್ತಿ ನೋಡಿ🙏🚩🙏| ಡಾ. ವಿದ್ಯಾಭೂಷಣ || ಸುಂದರಕಾಂಡ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಎಷ್ಟು ಸಾಹಸವಂತ ನೀನೇ ಬಲವಂತ ದಿಟ್ಟ ಮೂರುತಿ ಭಳಿಭಳಿರೇ ಹನುಮಂತ ॥ ಪ ॥ ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆ ಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೋ ॥ ಅ ಪ ॥ ರಾಮರಪ್ಪಣೆಯಿಂದ ಶರಧಿಯ ದಾಟಿ ಆ ಮಹಾ ಲಂಕೆಯ ಕಂಡೆ ಕಿರೀಟಿ ಸ್ವಾಮಿಯ ಕಾರ್ಯವ ಪ್ರೇಮದಿ ನಡೆಸಿದಿ ಈ ಮಹಿಯೊಳು ನಿನಗಾರೈ ಸಾಟಿ ॥ 1 ॥ ದೂರದಿಂದಸುರನ ಪುರವನ್ನು ನೋಡಿ ಭರದಿ ಶ್ರೀರಾಮರ ಸ್ಮರಣೆಯ ಮಾಡಿ ಹಾರಿದೆ ಹರುಷದಿ ಹರಿಸಿ ಲಂಕಿಣಿಯನು ವಾರಿಜಮುಖಿಯನು ಕಂಡು ಮಾತಾಡಿ ॥ 2 ॥ ರಾಮರ ಕ್ಷೇಮವ ರಮಣಿಗೆ ಪೇಳಿ ತಾಮಸ ಮಾಡದೆ ಮುದ್ರಿಕೆ ನೀಡಿ ಪ್ರೇಮದಿ ಜಾನಕಿ ಕುರುಹನು ಕೊಡಲಾಗ ಆ ಮಹಾವನದೊಳು ಫಲವನು ಬೇಡಿ ॥ 3 ॥ ಕಣ್ಣಿಗೆ ಪ್ರಿಯವಾದ ಹಣ್ಣನು ಕೊಯ್ದು ಹಣ್ಣಿನ ನೆವದಲಿ ಅಸುರರ ಹೊಯ್ದು ಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತ ಬಣ್ಣಿಸಿ ಅಸುರರ ಬಲವನು ಮುರಿದು ॥ 4 ॥ ಶೃಂಗಾರ ವನದೊಳಗಿದ್ದ ರಾಕ್ಷಸರ ಅಂಗವನಳಿಸಿದೆ ಅತಿರಣಶೂರ ನುಂಗಿ ಅಸ್ತ್ರಗಳ ಅಕ್ಷಕುವರನ ಭಂಗಿಸಿ ಬಿಸುಟೆಯೋ ಬಂದ ರಕ್ಕಸರ ॥ 5 ॥ ದೂರು ಪೇಳಿದರೆಲ್ಲಾ ರಾವಣನೊಡನೆ ಚೀರುತ್ತ ಕರೆಸಿದ ಇಂದ್ರಜಿತುವನೆ ಚೋರಕಪಿಯ ನೀ ಹಿಡಿತಹುದೆನ್ನುತ ಶೂರರ ಕಳುಹಿದ ನಿಜಸುತನೊಡನೆ ॥ 6 ॥ ಪಿಡಿದನು ಇಂದ್ರಜಿತು ಕಡು ಕೋಪದಿಂದ ಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದ ಗುಡುಗುಡುಗುಟ್ಟುತ ಕಿಡಿಕಿಡಿಯಾಗುತ ನಡೆದನು ಲಂಕೆಯ ಒಡೆಯನಿದ್ದೆಡೆಗೆ ॥ 7 ॥ ಕಂಡ ರಾವಣನು ಉದ್ದಂಡಕಪಿಯನು ಮಂಡೆಯ ತೂಗುತ ಮಾತಾಡಿಸಿದನು ಭಂಡು ಮಾಡದೆ ಬಿಡೆ ನೋಡು ಕಪಿಯನೆ ಗಂಡುಗಲಿಯು ದುರುದುರಿಸಿ ನೋಡಿದನು ॥ 8 ॥ ಛಲವ್ಯಾಕೋ ನಿನಗಿಷ್ಟು ಎಲೆ ಕೊಡಗನೆ ನೆಲೆಯಾವುದ್ಹೇಳೋ ನಿನ್ನೊಡೆಯನ್ಹೆಸರನ್ನು ಬಲವಂತ ರಾಮರ ಬಂಟ ಬಂದಿಹೆನೋ ಹಲವು ಮಾತ್ಯಾಕೋ ಹನುಮನು ನಾನೇ ॥ 9 ॥ ಬಡ ರಾವಣನೆ ನಿನ್ನ ಬಡಿದು ಹಾಕುವೆನೋ ಒಡೆಯನಪ್ಪಣೆಯಿಲ್ಲ ಎಂದು ತಾಳಿದೆನೋ ಹುಡಿಯೇಳಿಸುವೆನೋ ಖುಲ್ಲ ರಕ್ಕಸನೆ ತೊಡೆವೆನೋ ನಿನ್ನ ಪಣೆಯ ಅಕ್ಷರವ ॥ 10 ॥ ನಿನ್ನಂಥ ದೂತರು ರಾಮನ ಬಳಿಯೊಳು ಇನ್ನೆಷ್ಟು ಮಂದಿ ಉಂಟು ಹೇಳೋ ನೀ ತ್ವರಿಯ ನನ್ನಂಥ ದೂತರು ನಿನ್ನಂಥ ಪ್ರೇತರು ಇನ್ನೂರು ಮುನ್ನೂರು ಕೋಟಿ ಕೇಳರಿಯಾ ॥ 11 ॥ ಕಡು ಕೋಪದಿಂದಲಿ ಖೂಳ ರಾವಣನು ಸುಡಿರೆಂದ ಬಾಲವ ಸುತ್ತಿ ವಸನವನು ಒಡೆಯನ ಮಾತಿಗೆ ತಡೆಬಡೆ ಇಲ್ಲದೆ ಒಡನೆ ಮುತ್ತಿದರು ಗಡಿಮನೆಯವರು ॥ 12 ॥ ತಂದರು ವಸನವ ತಂಡತಂಡದಲಿ ಒಂದೊಂದು ಮೂಟೆ ಎಂಭತ್ತು ಕೋಟಿಯಲಿ ಚಂದದಿ ಹರಳಿನ ತೈಲದೊಳದ್ದಿಸಿ ನಿಂದ ಹನುಮನು ಬಾಲವ ಬೆಳೆಸುತ ॥ 13 ॥ ಶಾಲು ಸಕಲಾತಿಯು ಸಾಲದೆಯಿರಲು ಬಾಲೇರ ವಸ್ತ್ರವ ಸೆಳೆದು ತಾರೆನಲು ಬಾಲವ ನಿಲ್ಲಿಸೆ ಬೆಂಕಿಯನಿಡುತಲಿ ಕಾಲಮೃತ್ಯುವ ಕೆಣಕಿದರಲ್ಲಿ ॥ 14 ॥ ಕುಣಿಕುಣಿದಾಡುತ ಕೂಗಿ ಬೊಬ್ಬಿಡುತ ಇಣಿಕಿನೋಡುತ ಅಸುರರನಣಕಿಸುತ ಝಣಝಣಝಣರೆನೆ ಬಾಲದ ಗಂಟೆಯು ಮನದಿ ಶ್ರೀ ರಾಮರ ಪಾದವ ನೆನೆಯುತ ॥ 15 ॥ ಮಂಗಳಂ ಶ್ರೀರಾಮಚಂದ್ರಮೂರುತಿಗೆ ಮಂಗಳಂ ಸೀತಾದೇವಿ ಚರಣಂಗಳಿಗೆ ಮಂಗಳವೆನುತ ಲಂಕೆಯಸುಟ್ಟು ಲಂಘಿಸಿ ಅಸುರನ ಗಡ್ದಕೆ ಹಿಡಿದ ॥ 16 ॥ ಹತ್ತಿತು ಅಸುರನ ಗಡ್ಡ ಮೀಸೆಗಳು ಸುತ್ತಿತು ಹೊಗೆ ಬ್ರಹ್ಮಾಂಡ ಕೋಟಿಯೊಳು ಚಿತ್ತದಿ ರಾಮರು ಕೋಪಿಸುವರು ಎಂದು ಚಿತ್ರದಿ ನಡೆದನು ಅರಸನಿದ್ದೆಡೆಗೆ ॥ 17 ॥ ಸೀತೆಯ ಕ್ಷೇಮವ ರಾಮರಿಗ್ಹೇಳಿ ಪ್ರೀತಿಯಿಂ ಕೊಟ್ಟ ಕುರುಹ ಕರದಲ್ಲಿ ಸೇತುವೆ ಕಟ್ಟಿ ಚದುರಂಗ ಬಲಸಹ ಮುತ್ತಿತು ಲಂಕೆಯ ಸೂರೆಗೈಯುತಲಿ ॥ 18 ॥ ವೆಗ್ಗಳವಾಯಿತು ರಾಮರ ದಂಡು ಮುತ್ತಿತು ಲಂಕೆಯ ಕೋಟೆಯ ಕಂಡು ಹೆಗ್ಗದ ಕಾಯ್ವರ ನುಗ್ಗು ಮಾಡುತಿರೆ ಝಗ್ಗನೆ ಪೇಳ್ದರು ರಾವಣಗಂದು ॥ 19 ॥u ರಾವಣ ಮೊದಲಾದ ರಾಕ್ಷಸರ ಕೊಂದು ಭಾವಶುದ್ಧದಲಿ ವಿಭೀಷಣ ಬಾಳೆಂದು ದೇವಿ ಸೀತೆಯನೊಡಗೊಂಡಯೋಧ್ಯದಿ ದೇವ ಶ್ರೀರಾಮರು ರಾಜ್ಯವಾಳಿದರು ॥ 20 ॥ ಶಂಖದೈತ್ಯನ ಕೊಂದೆ ಶರಣು ಶರಣಯ್ಯ ಶಂಖಗಿರಿಯಲಿ ನಿಂದೆ ಹನುಮಂತರಾಯ ಪಂಕಜಾಕ್ಷ ಹಯವದನನ ಕಟಾಕ್ಷದಿ ಬಿಂಕದಿ ಪಡೆದೆಯೋ ಅಜನಪದವಿಯ ॥ 21 ॥