У нас вы можете посмотреть бесплатно ಡಾಕ್ಟರ್ ಓವರ್ಸಿಸ್ ಸಂಸ್ಥೆಯ ವತಿಯಿಂದ ವೈದ್ಯಕೀಯ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಡಾಕ್ಟರ್ ಓವರ್ಸಿಸ್ ಸಂಸ್ಥೆಯ ವತಿಯಿಂದ ವೈದ್ಯಕೀಯ ತರಗತಿಗಳಿಗೆ ವಿದೇಶದಲ್ಲಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡಾಕ್ಟರ್ ಓವರ್ಸಿಸ್ ಸಂಸ್ಥೆಯ ವತಿಯಿಂದ ಪಿಯುಸಿ ಪರೀಕ್ಷೆಯ ನಂತರ ವೈದ್ಯಕೀಯ ತರಗತಿಗಳಿಗೆ ವಿದೇಶದಲ್ಲಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು. ವೈದ್ಯ ಉತ್ಸವ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಥಮ ಬಹುಮಾನ 5 ಲಕ್ಷ ದ್ವಿತೀಯ ಬಹುಮಾನ 3,00,000 ಮತ್ತು ತೃತೀಯ ಬಹುಮಾನ ಎರಡು ಲಕ್ಷ ನೀಡಲಾಯಿತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ವಿಜಯಲಕ್ಷ್ಮಿ ದೇಶಮಾನೆ ಮಾತನಾಡಿ ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಉಪಯೋಗ ಹೆಚ್ಚಾಗಬೇಕು ಇದರಿಂದಾಗಿ ವೈದ್ಯ ವೃತ್ತಿಯ ಮಹತ್ವ ಹೆಚ್ಚಾಗುತ್ತದೆ. ವೈದ್ಯಕೀಯ ವೃತ್ತಿ ಅತ್ಯಂತ ಶ್ರೇಷ್ಠವಾದ ವೃತ್ತಿಯಾಗಿದೆ ಹಾಗಾಗಿ ವೈದ್ಯರು ಸೇವೆಯತ್ತ ಗಮನಹರಿಸಬೇಕು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಶಾಸಕ ಬಿ ಶಿವಣ್ಣ ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೇ ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದು ದುಃಖದ ಬೆಳವಣಿಗೆಯಾಗಿದೆ. ವೈದ್ಯಕೀಯ ತರಗತಿಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಭಾರತ ದೇಶಕ್ಕೆ ಹೆಸರು ಬೇಕು ಎಂದರು. ಡಾಕ್ಟರ್ ಓವರ್ಸಿಸ್ ಸಂಸ್ಥೆಯ ಮುಖ್ಯಸ್ಥ ಹರಿ ನರೇಂದ್ರ ಮಾತನಾಡಿ ಡಾಕ್ಟರ್ ಓ ಸಿಸ್ ಸಂಸ್ಥೆಯ ವತಿಯಿಂದ ಪ್ರತಿ ವರ್ಷ 150 ವಿದ್ಯಾರ್ಥಿಗಳು ವೈದ್ಯಕೀಯ ತರಗತಿಗಳಿಗಾಗಿ ವಿದೇಶಕ್ಕೆ ತೆರಳುತ್ತಾರೆ. ಆರು ವರ್ಷಗಳು ಸಹ ಸಂಸ್ಥೆಯು ಅವರೊಂದಿಗಿದ್ದು ವಿದೇಶದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಉತ್ತಮ ಸೇವೆ ನೀಡುತ್ತಿರುವುದರಿಂದ ಪ್ರತಿ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಹೆಚ್ಚಾಗಬೇಕು ಈ ನಿಟ್ಟಿನಲ್ಲಿ ನೀಟ್ ಪರೀಕ್ಷೆಯಲ್ಲಿ ಎಲ್ಲರಿಗೂ ವೈದ್ಯರಾಗುವ ಅವಕಾಶ ಸಿಗುವುದಿಲ್ಲ ಹಾಗಾಗಿ ವಿದೇಶಗಳಲ್ಲಿ ಅವಲಂಬನೆ ಆಗಬೇಕು ಎಂದರು. ಡಾಕ್ಟರ್ ಓವರ್ಸಿಸ್ ಸಂಸ್ಥೆಯ ಸಿಇಒ ಡಾಕ್ಟರ್ ಭಾಗ್ಯಶ್ರೀ ಹರಿ, ಹಿರಿಯ ವೈದ್ಯ ಡಾ. ಪ್ರಸನ್ನ ರಾಜು ಇದ್ದರು.