У нас вы можете посмотреть бесплатно ನ್ಯಾಯಾಂಗವು ಸರ್ಕಾರಿ ವ್ಯವಸ್ಥೆಯ ಸ್ವತಂತ್ರ ಅಂಗ | ರಾಜ್ಯಸಭೆಯಲ್ಲಿ ಸಚಿವ ಅರ್ಚುನ್ ರಾಮ್ ಮೇಘ್ವಾಲ್ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ರಾಜ್ಯಸಭೆಯ ಇಂದಿನ ಕಲಾಪ ಆರಂಭಗೊಂಡಾಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ದೊರೆಯುತ್ತಿಲ್ಲ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಯಾಗಿ ರಾಜ್ಯಸಭಾ ನಾಯಕ ಜೆ.ಪಿ. ನಡ್ಡಾ, ಲೋಕಸಭೆಯ ಪ್ರಕ್ರಿಯೆಗಳ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚಿಸಲು ನಿಯಮಗಳ ಪ್ರಕಾರ ಅವಕಾಶವಿಲ್ಲ ಎಂದು ಹೇಳಿದರು. ಸರ್ಕಾರ ಯಾವುದೇ ವಿಚಾರಗಳ ಕುರಿತು ಚರ್ಚೆ ನಡೆಸಲು ಸಿದ್ಧವಿದೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿದಾಗ ಸಚಿವ ಪಿಯೂಷ್ ಗೋಯೆಲ್ ಉಭಯ ಸದನಗಳಲ್ಲಿ ಹೇಳಿಕೆ ನೀಡಿದರು. ಅದರಂತೆ ಪ್ರತಿಯೊಂದೂ ವಿಚಾರಗಳ ಕುರಿತಾಗಿಯೂ ವಿಸ್ತೃತ ಚರ್ಚೆ ನಡೆಸಲು ಸರ್ಕಾರ ತಯಾರಿದೆ ಎಂದು ಹೇಳಿದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮೇಲ್ಮನೆಗೆ ತನ್ನದೇ ಆದ ಘನತೆಯಿದ್ದು, ನಿಯಮಗಳ ಪ್ರಕಾರ ಸದನದ ವ್ಯವಹಾರಗಳನ್ನು ನಡೆಸಬೇಕಾಗುತ್ತದೆ. ಲೋಕಸಭೆ ಮತ್ತು ರಾಜ್ಯಸಭೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಣೆ ಮಾಡುವ ಜವಾಬ್ದಾರಿ ಹೊಂದಿವೆ ಎಂದು ಸ್ಪಷ್ಟನೆ ನೀಡಿದರು. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ನಡೆದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು. ಬಳಿಕ ಪ್ರಶ್ನೋತ್ತರ ಕಲಾಪದಲ್ಲಿ ಕಾನೂನು ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘ್ವಾಲ್, ಭಾರತದ ಸಾಂವಿಧಾನಿಕ ವ್ಯವಸ್ಥೆಯಲ್ಲಿ ನ್ಯಾಯಾಂಗದ ಸ್ವತಂತ್ರ ಕಾರ್ಯನಿರ್ವಹಣೆ ಕುರಿತು ಸರ್ಕಾರ ಬದ್ಧವಾಗಿದೆ. ನ್ಯಾಯಾಂಗವು ಸರ್ಕಾರಿ ವ್ಯವಸ್ಥೆಯ ಸ್ವತಂತ್ರ ಅಂಗವಾಗಿದ್ದು, ನ್ಯಾಯಾಧೀಶರು ಸ್ವತಂತ್ರವಾಗಿ ತಮ್ಮ ಕಾರ್ಯನಿರ್ವಹಣೆ ನಡೆಸಲು ಸೂಕ್ತ ವಾತಾವರಣ ಇರಬೇಕು ಎನ್ನುವುದು ಸರ್ಕಾರದ ನಿಲುವಾಗಿದೆ ಎಂದು ಸ್ಪಷ್ಟಪಡಿಸಿದರು. ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮಾಧ್ಯಮದ ಮೂಲಕವು ವಿಚಾರಣೆ ನಡೆಸಲಾಗುತ್ತಿದೆ. ತಂತ್ರಜ್ಞಾನವನ್ನು ಸಮರ್ಥವಾಗಿ ಬಳಕೆ ಮಾಡಲಾಗುತ್ತಿದ್ದು, ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದರು. #LiveDDChandanaNews #DDChandanaNews #DDChandana #DDKannada