У нас вы можете посмотреть бесплатно 9 ದಿನಗಳ ವಿಧಾನ ಮಂಡಲ ಅಧಿವೇಶನ ಮುಕ್ತಾಯ ; ಗದ್ದಲದ ನಡುವೆಯೂ ಅಧಿಕೃತ ನಿರ್ಣಯ ಅಂಗೀಕಾರ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವರ್ಷದ ಮೊದಲ ರಾಜ್ಯ ವಿಧಾನ ಮಂಡಲ ಅಧಿವೇಶನ ನಿನ್ನೆ ಸಂಜೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಯಿತು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ 9ನೇ ವಿಧಾನಸಭಾ ಅಧಿವೇಶನದ ಸಂಕ್ಷಿಪ್ತ ವರದಿಯನ್ನು ಮಂಡಿಸಿದರು. ಜನವರಿ 22ರಿಂದ ಒಟ್ಟು 9 ದಿನಗಳು ಕಲಾಪ ನಡೆದಿದ್ದು, ಒಟ್ಟು 48 ಗಂಟೆ 52 ನಿಮಿಷಗಳ ಕಾಲ ಚರ್ಚೆ ನಡೆದಿದೆ. ರಾಜ್ಯಪಾಲರ ಭಾಷಣದ ಮೇಲೆ 27 ಸದಸ್ಯರು 15 ಗಂಟೆ 15 ನಿಮಿಷ ಮಾತನಾಡಿದ್ದಾರೆ. ಸರ್ಕಾರದ ಅಧಿಕೃತ ನಿರ್ಣಯದ ಮೇಲೆ 6 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ ಎಂದು ಮಾಹಿತಿ ನೀಡಿದರು. ಇದಕ್ಕೂ ಮುನ್ನ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಅಬಕಾರಿ ಹಗರಣದ ನೈತಿಕ ಹೊಣೆ ಹೊತ್ತು ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ಧರಣಿ ನಡೆಸಿದ್ದರು. ಗದ್ದಲ, ಸಭಾತ್ಯಾಗದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಅಧಿಕೃತ ನಿರ್ಣಯವನ್ನು ಮಂಡಿಸಿದರು. ಸಭಾಧ್ಯಕ್ಷರು ಧ್ವನಿಮತದ ಮೂಲಕ ನಿರ್ಣಯ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು. ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಅಧಿಕೃತ ನಿರ್ಣಯವನ್ನು , ಮುಖ್ಯಮಂತ್ರಿ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಮಂಡಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ನ ಬೋಜೇಗೌಡ, ಬಿಜೆಪಿಯ ನವೀನ್, ರವಿಕುಮಾರ್, ಹೇಮಲತಾ ನಾಯಕ್ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿ , ವಿಬಿ ಜಿ ರಾಮ್ ಜಿ , ಭ್ರಷ್ಟಾಚಾರವನ್ನು ಹತ್ತಿಕ್ಕುವ ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಉತ್ತಮವಾದ ಕಾಯ್ದೆಯಾಗಿದೆ ಎಂದು ಪ್ರತಿಪಾದಿಸಿದರು. ಆಡಳಿತ ಪಕ್ಷದ ನಾಯಕ ಎನ್.ಎಸ್. ಬೋಸರಾಜ್, ಸದಸ್ಯರಾದ ರಮೇಶ್ ಬಾಬು, ಎಸ್. ರವಿ, ಸುಧಾಮ್ ದಾಸ್, ಮತ್ತಿತರರು ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು, ಮರುಸ್ಥಾಪಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಬೆಂಬಲಿಸುವುದಾಗಿ ಹೇಳಿದರು. #LiveDDChandanaNews #DDChandanaNews #DDChandana #DDKannada