У нас вы можете посмотреть бесплатно ವಿಜಯಪುರದಲ್ಲಿ JDS ಬೆಳ್ಳಿಹಬ್ಬ ಭಾರೀ ಸಮಾವೇಶ | ದೇವೇಗೌಡರ ಗ್ಯಾರಂಟಿ ಪ್ರಶ್ನೆ, ಬಿಜೆಪಿ-ಜೆಡಿಎಸ್ ಸರ್ಕಾರದ ಸುಳಿವು или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
#jds #bijapur #bjpjdsallience #hddevegowda #karanatakapolitics ವಿಜಯಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಭಾರೀ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ವಿಜಯಪುರ ನಗರದ ಹೊರಭಾಗದ ಸಿಂದಗಿ ರಸ್ತೆಯ ಸೇವಾಲಾಲ ವೃತ್ತದ ಬಳಿ ನಡೆದ ಈ ಸಮಾವೇಶವನ್ನು “ಜೆಡಿಎಸ್ ಬೆಳ್ಳಿಹಬ್ಬ” ಎಂಬ ಹೆಸರಿನಲ್ಲಿ ಆಯೋಜಿಸಲಾಗಿತ್ತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಹಲವು ನಾಯಕರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿಜಯಪುರ, ಭಾಗಲಕೋಟೆ, ಬೆಳಗಾವಿ, ಗದಗ ಸೇರಿದಂತೆ ಕಿತ್ತೂರು ಕರ್ನಾಟಕದ ವಿವಿಧ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾದರು. ಲಂಬಾಣಿ ನೃತ್ಯ, ಹಲಗೆ ಮೇಳ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಕಾರ್ಯಕರ್ತರು ಸಂಭ್ರಮದಿಂದ ಆಗಮಿಸಿದರು. ವೇದಿಕೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ “ಗ್ಯಾರಂಟಿ ಗ್ಯಾರಂಟಿ ಗ್ಯಾರಂಟಿ ಅಂದ್ರೇನು?” ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ತಾವು ಮಾಡಿರುವ ಕೆಲಸಗಳನ್ನೂ ವಿವರಿಸಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಸರ್ಕಾರ ಬರಬೇಕು ಎಂದು ಅಭಿಪ್ರಾಯಪಟ್ಟರು. ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವ ವಿಚಾರವನ್ನು ಮೋದಿ ಮತ್ತು ಅಮಿತ್ ಶಾ ನಿರ್ಧರಿಸುತ್ತಾರೆ ಎಂದರು. ಜನರು ಆಶೀರ್ವಾದ ನೀಡಬೇಕು ಎಂದು ಮನವಿ ಮಾಡಿದರು.