У нас вы можете посмотреть бесплатно ಬೆಟ್ಟಕ್ಕೆ ಬಳ್ಳು ಬೊಗಳಿದಂತಾಯಿತ್ತಯ್ಯ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಬೆಟ್ಟಕ್ಕೆ ಬಳ್ಳು ಬೊಗಳಿದಂತಾಯಿತ್ತಯ್ಯ ಅವಧಿ ಅಳಿಯಿತ್ತು ವ್ಯವಧಾನ ಉಳಿಯಿತ್ತು. ನಿಜವೆ ನಿಜವನೊಡಗೂಡಿತ್ತು ಕೇಳಾ ಬಸವಣ್ಣ. ಕಲಿಯುಗದಲ್ಲಿ ಮುಂದೆ ಇರಬಾರದು ನಿಜ ಶರಣಂಗೆ ನಡೆ/ ನೀನು ಕಪ್ಪಡಿಯ ಸಂಗಯ್ಯನಲ್ಲಿ ಒಡಗೂಡು. ಉಳುಮೆಯಲ್ಲಿ ನಿಜವನೆಯ್ದು ನಡೆ, ಚೆನ್ನಬಸವಣ್ಣಾ. ಮಹವನೊಡಗೂಡು ಮಡಿವಾಳಯ್ಯ. ಸೊಡ್ಡಳ ಬಾಚರಸರು ಮೊದಲಾದ ಪ್ರಮಥರೆಲ್ಲರು ನಿಜವನೆಯ್ದುವುದು ನಿರ್ವಯಲ ಸಮಾಧಿಯಲ್ಲಿ. ಬಗಿದು ಹೋಗಿ ಲಿಂಗದೊಳಗೆ ಹೊಗುವರೆಲ್ಲರೂ ! ನಡೆಯಿರಿ ಕಾಯವೆರಸಿ ಕೈಲಾಸಕ್ಕೆ, ಕಾಯಸಹಿತ ಎಯ್ದುವುದು. ನಿಮಗೆಲ್ಲರಿಗೆಯೂ ಉಪದೇಶಮಂತ್ರ ತಪ್ಪದು. ನಮಗೆ ಕದಳಿಯಲ್ಲಿ ಹೊಕ್ಕು ನಿಜದಲ್ಲಿ ಒಡಗೂಡುವ ಪರಿಣಾಮ. ಇದು ನಮ್ಮ ಗುಹೇಶ್ವರಲಿಂಗದ ಅಣತಿ ನಿಮಗೆಲ್ಲರಿಗೆಯೂ. – ಅಲ್ಲಮಪ್ರಭುದೇವರು ಅಟ್ಟಡವಿಯಲ್ಲಿ ಬಿಟ್ಟುಹೋದಿರಿ ಬಸವಯ್ಯಾ. ನಟ್ಟನಡುಗ್ರಾಮವ ಕೆಡಿಸಿಹೋದಿರಿ ಬಸವಯ್ಯಾ. ಹುಟ್ಟಿಲ್ಲದ ಬಂಜೆಗೆ ಮಕ್ಕಳ ಕೊಟ್ಟಿರಿ ಬಸವಯ್ಯಾ. ಆ ಮಕ್ಕಳ ಫಲವಿಲ್ಲದಂತೆ ಮಾಡಿದಿರಿ ಬಸವಯ್ಯಾ. ಸಂಗಯ್ಯನಲ್ಲಿ ನೀನೆಂತಪ್ಪ ಮಹಿಮನಯ್ಯಾ ಬಸವಯ್ಯಾ? – ನೀಲಮ್ಮತಾಯಿ ಕಲ್ಯಾಣವಿಲ್ಲ ಕೈಲಾಸವಿಲ್ಲ, ಬಸವಾ. ಕಲ್ಯಾಣವಿಲ್ಲದ ಕಾರಣ ಕೈಲಾಸವಿಲ್ಲವೆನಗೆ, ಬಸವಾ. ಆ ಕಲ್ಯಾಣ ಕೈಲಾಸವಾಯಿತ್ತು ಬಸವಾ. ಆ ಕಲ್ಯಾಣವಳಿದು ಕೈಲಾಸವಾದ ಬಳಿಕ, ಬಸವನ ಮೂರ್ತಿಯಿಲ್ಲ. ಬಸವನ ಮೂರ್ತಿಯನರಿಯದ ಕಾರಣ ಕೈಲಾಸವಿಲ್ಲ ಕಲ್ಯಾಣವಿಲ್ಲವಯ್ಯಾ, ಸಂಗಯ್ಯಾ. – ನೀಲಮ್ಮತಾಯಿ ಲಕ್ಷದ ಮೇಲೆ ತೊಂಬತ್ತಾರುಸಾವಿರ ವಚನ ನಿತ್ಯಭಂಡಾರಕ್ಕೆ ಸಂದಿತ್ತಯ್ಯಾ. ಬೆಟ್ಟಕ್ಕೆ ಬಳ್ಳು ಬಗುಳಿದಂತಾಯಿತ್ತಯ್ಯಾ. ಕರೆದುಕೊಳ್ಳಯ್ಯಾ, ಓ ಎನ್ನಯ್ಯಾ, ಕೂಡಲಸಂಗಮದೇವಾ. ಬಸವಣ್ಣ