У нас вы можете посмотреть бесплатно ರಾಮನಗರ ಬಳಿ ನೂತನ ವೇದನಾದ ಗುರುಕುಲ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ರಾಮನಗರ ಬಳಿಯ ಬನ್ನಿಕುಪ್ಪೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ವೇದನಾದ ಗುರುಕುಲಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಸಂಸದ ಡಾ. ಸಿ.ಎನ್. ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಳಿಕ ನಿರ್ಮಲಾ ಸೀತಾರಾಮನ್, ನಗರದ ಹೊರವಲಯದಲ್ಲಿ ಗುರುಕುಲ ಶಿಕ್ಷಣ ಸಂಸ್ಥೆ ಆರಂಭವಾಗುತ್ತಿದ್ದು, ವೇದಗಳ ಬಗ್ಗೆ ಬೋಧನೆ ಮಾಡಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ಅನುಕೂಲವಾಗಲಿ. ಗುರುಕುಲದ ಜೊತೆಗೆ ಗೋಶಾಲೆ ಆರಂಭವಾಗುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದರು. ಬೆಂಗಳೂರು ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಹೊರವರ್ತುಲ ರಸ್ತೆ STRR ಗೆ ಸಂಬಂಧಿಸಿದಂತೆ ಪರಿಹಾರ ನೀಡುವಂತೆ ರೈತರು ಮನವಿ ಸಲ್ಲಿಸಿದ್ದಾರೆ. ಹೊರವರ್ತುಲ ರಸ್ತೆ ನಿರ್ಮಾಣ ಸಂಬಂಧ, ಸಾರಿಗೆ ಸಚಿವಾಲಯ ಅನುಮೋದನೆ ನೀಡಿದ್ದು, ಹಣಕಾಸು ಸಚಿವಾಲಯವು ಸಮ್ಮತಿ ನೀಡಿದೆ. ಸಚಿವ ಸಂಪುಟದ ಮುಂದೆ ಈ ವಿಷಯ ಪ್ರಸ್ತಾಪವಾದ ನಂತರ ರಿಂಗ್ ರಸ್ತೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲಾಗುವುದು. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. #LiveDDChandanaNews #DDChandanaNews #DDChandana #DDKannada