У нас вы можете посмотреть бесплатно ರಾಷ್ಟ್ರಪತಿಯವರ ಭಾಷಣದ ಮೇಲೆ ಚರ್ಚೆ ; ಲೋಕಸಭೆಯಲ್ಲಿ ಚರ್ಚೆ ಮುಂದುವರಿಕೆ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆ ಆರಂಭವಾಗಿದೆ. ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್, ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯನ್ನು ಆರಂಭಿಸಿದರು. ರಾಷ್ಟ್ರಪತಿ ಅವರು ತಮ್ಮ ಭಾಷಣದಲ್ಲಿ ಆರೋಗ್ಯ, ಶಿಕ್ಷಣ, ಮೂಲಸೌಕರ್ಯ, ರಕ್ಷಣೆ ಸೇರಿದಂತೆ ಪ್ರಮುಖ ವಲಯಗಳಲ್ಲಿ ಸರ್ಕಾರದ ಕಾರ್ಯವನ್ನು ಪ್ರಶಂಸಿಸಿದ್ದಾರೆ. ಎಲ್ಲ ವರ್ಗಗಳು, ಸಮುದಾಯಗಳ ಕಲ್ಯಾಣಕ್ಕಾಗಿ ಸರ್ಕಾರ ನಿರಂತರವಾಗಿ ಅನೇಕ ಉಪಕ್ರಮಗಳನ್ನು ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ತಿಳಿಸಿದರು. ದೇಶಾದ್ಯಂತ ಪಿಎಂ-ಶ್ರೀ ಯೋಜನೆಯಡಿ ಶಾಲೆಗಳ ಸಂಖ್ಯೆ 15 ಸಾವಿರ ಏರಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಅವರು, ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಶಾಲೆಗಳು ಪಿಎಂ-ಶ್ರೀ ಯೋಜನೆಗೆ ಸೇರಿವೆ. ಈ ಶಾಲೆಗಳಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಿಕ್ಷಣ ನೀಡಲಾಗುತ್ತಿದೆ. ಆಧುನಿಕ ಸುರಕ್ಷತಾ ಮತ್ತು ಗುಣಮಟ್ಟ ಕಲಿಕೆ ಪರಿಸರವನ್ನು ನಿರ್ಮಿಸುವ ಉದ್ದೇಶವನ್ನು ಯೋಜನೆ ಹೊಂದಿದೆ. ಈ ಶಾಲೆಗಳನ್ನು ಮೂರು ಹಂತದ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಹೊಸ ಶಾಲೆ ತೆರೆಯಲು ರಾಜ್ಯ ಸರ್ಕಾರಗಳು ಸಮೀಕ್ಷಾ ವರದಿಯನ್ನು ಕೇಂದ್ರಕ್ಕೆ ಕಳುಹಿಸಬೇಕಾಗುತ್ತದೆ. ಇದರನ್ವಯ ಶಾಲೆಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸಲಾಗುವುದು ಎಂದರು. ಕಸ್ತೂರ್ ಬಾ ಗಾಂಧಿ ಬಾಲಕಿಯರ ವಿದ್ಯಾಲಯಗಳು ಉತ್ತಮ ಸಾಧನೆ ತೋರುತ್ತಿವೆ. ಬಾಲಕಿಯರು ಈ ಶಾಲೆಗಳಲ್ಲಿ ಉತ್ತಮ ಕಲಿಕೆ ಪರಿಸರವನ್ನು ಹೊಂದಿದ್ದಾರೆ. ಈ ಶಾಲೆಗಳಿಗೆ ಈವರೆಗೆ 7 ಲಕ್ಷಕ್ಕೂ ಅಧಿಕ ಬಾಲಕಿಯರು ನೋಂದಣಿಯಾಗಿದ್ದಾರೆ. ಇದಲ್ಲದೆ, ದೇಶದ ಎಲ್ಲ ಜಿಲ್ಲೆಗಳಲ್ಲಿ ತಲಾ 1 ಬಾಲಕಿಯರ ಶಾಲೆ ಸ್ಥಾಪಿಸಲು ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು. ನೌಕರರ ರಾಜ್ಯ ವಿಮಾ ಯೋಜನೆಯಡಿ ಸ್ಥಳವನ್ನು ಗುರುತಿಸಿ ಅಗತ್ಯ ವರದಿ ಕಳುಹಿಸಿದರೆ ಆಸ್ಪತ್ರೆಗಳನ್ನು ನಿರ್ಮಿಸಲು ಪರಿಗಣಿಸಲಾಗುವುದು ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನೌಕರರ ರಾಜ್ಯ ವಿಮಾ ಯೋಜನೆಯು ಸಾಮಾಜಿಕ ಭದ್ರತೆ ಮತ್ತು ಆರೋಗ್ಯ ವಿಮೆ ಒದಗಿಸಲಿದೆ. ಈ ಆಸ್ಪತ್ರೆಗಳನ್ನು ತೆರೆಯಲು ಹಲವು ನಿಯಮಗಳಿದ್ದು, ರಾಜ್ಯಗಳು ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಬೇಕಾಗುತ್ತದೆ. ಅಗತ್ಯವಿರುವ ಕಡೆ ಆಸ್ಪತ್ರೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು. ಪಾರಂಪರಿಕ ತಾಣಗಳು ಮತ್ತು ಸ್ಮಾರಕಗಳನ್ನು ಸಂರಕ್ಷಿತ ಸ್ಥಳ ಪಟ್ಟಿಗೆ ಸೇರಿಸಲು ಭಾರತೀಯ ಪುರಾತತ್ವ ಇಲಾಖೆಯ ವರದಿ ಅಗತ್ಯವಾಗಿರುತ್ತದೆ ಎಂದು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ದೇಶದಲ್ಲಿ ಪ್ರವಾಸೋದ್ಯಮ ಅಗಾಧವಾಗಿ ಬೆಳವಣಿಗೆ ಕಾಣುತ್ತಿದ್ದು, ಪ್ರವಾಸಿ ತಾಣಗಳು ಮತ್ತು ಸ್ಮಾರಕಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಂಸ್ಕೃತಿ ಮತ್ತು ಪರಂಪರೆ ರಕ್ಷಣೆಗೆ ಪ್ರಸಕ್ತ ಬಜೆಟ್ ನಲ್ಲಿ ಹಲವು ಉಪಕ್ರಮ ಘೋಷಿಸಲಾಗಿದೆ. ರಾಷ್ಟ್ರೀಯ ಸಂಸ್ಕೃತಿ ನಿಧಿ ಯೋಜನೆಯು ಸಾರ್ವಜನಿಕ -ಖಾಸಗಿ ಪಾಲುದಾರಿಕೆ ಕಾರ್ಯವ್ಯವಸ್ಥೆಯಾಗಿದ್ದು, ಯಶಸ್ವಿಯಾಗಿದೆ ಜಾರಿಯಾಗಿದೆ ಎಂದರು. #LiveDDChandanaNews #DDChandanaNews #DDChandana #DDKannada