У нас вы можете посмотреть бесплатно ಮನೆಯೆಂದರೆ ಹೀಗಿರಬೇಕು ಪ್ರಕೃತಿಯ ಮಡಿಲಲ್ಲಿ ಈ ಸುಂದರ ಮನೆ | ಕಲ್ಲು ಬಾವಿ ನಿರ್ಮಿಸುವ ವಿಧಾನ, Well Digging in Hand или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಶುದ್ಧ ನೀರು “ಪಾದೆ ಕಲ್ಲಿನಿಂದ ಕಟ್ಟಿದ ಬಾವಿ ನೀರು ಶುದ್ಧವಾಗಿರುತ್ತದೆ, ತಿಳಿಯಾಗಿರುತ್ತದೆ. ಯಾವುದೇ ಕ್ರಿಮಿಕೀಟಗಳು ಇರುವುದಿಲ್ಲ ಎನ್ನುವುದು ನನ್ನ ಅನುಭವ’ ಎಂದು ಗುತ್ತಿಗೆದಾರರಾದ ಉಡುಪಿ ಬೈಲೂರಿನ ವಾದಿರಾಜ್ ಹೇಳುತ್ತಾರೆ ಉಡುಪಿ: ಬೇಸಗೆ ಕಾಲ ಬಾವಿ ನಿರ್ಮಿಸುವವರಿಗೆ ಸಕಾಲ. ಈಗ ಎಲ್ಲವೂ ದಿಢೀರ್ ಆಗಬೇಕೆಂಬ ಇಚ್ಛೆ ಇರುವುದರಿಂದ ಬಾವಿಗೂ ಇದನ್ನೇ ಅನ್ವಯಿಸುತ್ತೇವೆ. ಇಂತಹ ಬಯಕೆ ಬಂದಾಕ್ಷಣ ಬೇರೆ ಬೇರೆ ಪರ್ಯಾಯ ಮಾರ್ಗಗಳೂ ಸಿದ್ಧಗೊಳ್ಳುತ್ತವೆ. ಇದರಲ್ಲಿ ಒಂದು ಸಿಮೆಂಟ್ ರಿಂಗ್ನ ಬಾವಿ. ಶಿಲೆ ಕಲ್ಲಿನ ಬಾವಿ ನಿರ್ಮಿಸಬೇಕಾದರೆ ಖರ್ಚು ಹೆಚ್ಚಾಗುತ್ತದೆ, ಹೆಚ್ಚು ಸಮಯ ತಗಲುತ್ತದೆ. ಸಿಮೆಂಟ್ ರಿಂಗ್ ಬಾವಿ ಖರ್ಚು ಕಡಿಮೆ ಆಗುತ್ತದೆ, ಸಮಯ ಕಡಿಮೆ ಸಾಕಾಗುತ್ತದೆ. ಆದರೆ ದೀರ್ಘಕಾಲದ ಪರಿಣಾಮ…? ಅಡ್ಡಪರಿಣಾಮ “ಕಲ್ಲು ನೈಸರ್ಗಿಕವಾದ ಕಾರಣ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಸಿಮೆಂಟ್ ರಿಂಗ್ನಲ್ಲಿ ಸ್ಟೀಲ್ ಮತ್ತು ಸಿಮೆಂಟ್ ಇರುವುದರಿಂದ ಕೆಲವು ಬಾರಿ ನೀರು ಕೆಂಬಣ್ಣಕ್ಕೆ ತಿರುವುದಿದೆ. ಸಿಮೆಂಟ್, ಸ್ಟೀಲ್ ಪರಿಣಾಮ ನೀರಿನ ಮೇಲೂ ಆಗುತ್ತದೆ. ನೀರಿನ ಉಜೆ (ಒರತೆ) ಕಲ್ಲು ಕಟ್ಟಿದ ಬಾವಿಯಲ್ಲಿ ಹೆಚ್ಚಿಗೆ ಇದ್ದರೆ ರಿಂಗ್ ಬಾವಿಯಲ್ಲಿ ಒರತೆ ಕಡಿಮೆ ಇರುತ್ತದೆ. ಸ್ಟೀಲ್ಗೆ ತುಕ್ಕು ಹಿಡಿದು ಅದರ ಪರಿಣಾಮ ನೀರಿನ ಮೇಲೆ ಆಗುವುದೂ ಇದೆ. ಒಟ್ಟಿನಲ್ಲಿ ಆರೋಗ್ಯದ ದೃಷ್ಟಿಯಲ್ಲಿ ಕಲ್ಲು ಕಟ್ಟಿದ ಬಾವಿ ಸೂಕ್ತ’ ಎಂಬ ಅಭಿಪ್ರಾಯ ಉಡುಪಿಯ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ ಆ್ಯಂಡ್ ಆರ್ಕಿಟೆಕ್ಟ್ ಕಾರ್ಯದರ್ಶಿ ಗೋಪಾಲ ಭಟ್ ಅವರದು. ಮುರಕಲ್ಲು ಇನ್ನೂ ಉತ್ತಮ ಮುರಕಲ್ಲಿನ (ಕೆಂಪು ಕಲ್ಲು) ಬಾವಿ ಶ್ರೇಷ್ಠ. ಈಗ ಇದು ಕಾಣಸಿಗುವುದು ಬಲು ವಿರಳ. ಇದರ ಲಾಭವೆಂದರೆ ಮುರಕಲ್ಲಿನ ಮೂಲಕವೇ ನೀರು ಹರಿದು ಬರುತ್ತದೆ. ಶಿಲೆಕಲ್ಲಿನಲ್ಲಾದರೆ ಕಲ್ಲಿನ ಬದಿಯಿಂದ ನೀರು ಹರಿದು ಬರಬೇಕು ಎಂಬ ಅಭಿಪ್ರಾಯ ಮಣಿಪಾಲ ಎಂಐಟಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ| ನಾರಾಯಣ ಶೆಣೈ ಅವರದು. ವೈಜ್ಞಾನಿಕವಾಗಿ ಕೊಳವೆಬಾವಿಯ ನೀರು ಉತ್ತಮ ಎಂಬ ಅಭಿಪ್ರಾಯವಿದೆ. ಕಾರಣವೆಂದರೆ ಇದಕ್ಕೆ ಹೊರಗಿನ ಸಂಪರ್ಕವಿರುವುದಿಲ್ಲ. ಸರಕಾರದ ನಿಯಮದಲ್ಲಿ ಇದು “ಸುರಕ್ಷಿತ ಕುಡಿಯುವ ನೀರು’. ಸಂಪು ತಯಾರಿಸಿ ಮಳೆ ನೀರು ಸಂಗ್ರಹಿಸಿ ಬಳಸುವುದು ಒಂದರ್ಥದಲ್ಲಿ ಇದೇ ಕಲ್ಪನೆ. ತೆರೆದ ಬಾವಿ ಮಳೆ ನೀರಿನಿಂದ ತುಂಬಿಕೊಳ್ಳುತ್ತದೆ ಎನ್ನುವುದಾದರೆ ಕೊಳವೆಬಾವಿಗೆ ನೀರಿನ ಒರೆತ ಹೇಗೆ ಸಾಧ್ಯ ಎಂಬ ಕುತೂಹಲ ಬರುವುದು ಸಹಜ. ಕೊಳವೆ ಬಾವಿಯಲ್ಲಿಯೂ ನೀರಿನ ಕೊರತೆ ಈಗೀಗ ಮನಬಂದಂತೆ ಕೊಳವೆಬಾವಿ ಕೊರೆದ ಕಾರಣ ಕೊಳವೆಬಾವಿಯಲ್ಲಿಯೂ ನೀರಿನ ಕೊರತೆ ಉಂಟಾಗುತ್ತಿದೆ. “ಯಾವುದೇ ಕೊಳವೆ ಬಾವಿಯಾದರೂ ಬಂಡೆಕಲ್ಲು ಕೊರೆಯಲೇಬೇಕು. ಅಲ್ಲಿಂದಲೇ ನೀರು ಬರುತ್ತದೆ. ನದಿಪಾತ್ರಗಳು, ಗುಡ್ಡಬೆಟ್ಟಗಳ ದೊಡ್ಡ ದೊಡ್ಡ ಬಂಡೆಗಳಲ್ಲಿರುವ ಬಿರುಕು, ಚಡಿಗಳಲ್ಲಿ ಮಳೆ ನೀರು ಇಂಗಿ ಭೂಗರ್ಭಕ್ಕೆ ಹೋಗಬೇಕು. ಅಲ್ಲಿಂದ ಕೊಳವೆ ಬಾವಿಗೆ ನೀರು ಪೂರೈಕೆಯಾಗಬೇಕು’ ಎನ್ನುತ್ತಾರೆ ಡಾ| ನಾರಾಯಣ ಶೆಣೈ ಅವರು. ಸಿಹಿ ನೀರಿನ ಬಾವಿ…! ತೆರೆದ ಬಾವಿಯ ಪಂಚಾಂಗವನ್ನು ಈಗ ಬಹುತೇಕರು ಸಿಮೆಂಟ್ನಿಂದಲೇ ತಯಾರಿಸುತ್ತಾರೆ. ತುಂಬಾ ಹಳೆಯ ಬಾವಿಗಳ ಪಂಚಾಂಗವನ್ನು ನೆಲ್ಲಿ ಮರ, ಹಂಗಾರು ಮರದಿಂದ ತಯಾರಿಸುತ್ತಿದ್ದರು. ಕೆಲವು ಬಾವಿಗಳ ನೀರು ಸಿಹಿ ಎನ್ನುವುದಿದೆ. ನೆಲ್ಲಿ ಮರದ ಪಂಚಾಂಗದ ಬಾವಿಯ ನೀರು ಬಹಳ ಸಿಹಿ. ಆಸಕ್ತರಿದ್ದರೆ ಕಾಸರಗೋಡು ಜಿಲ್ಲೆ ಅಡೂರು ಚರಗಂಡ ಅಮರಗಂಧಭವನದ ಸಂಜೀವ ರಾವ್ ಮನೆಯ ಬಾವಿ ನೀರಿನ ರುಚಿ ನೋಡಬಹುದು. ಇದು ಬಹಳ ಹಳೆಯ ಬಾವಿ, ನೆಲ್ಲಿ ಮರದ ಪಂಚಾಂಗದಲ್ಲಿ ಕಟ್ಟಲಾಗಿದೆ. ಸಾಧ್ಯವಾದಲ್ಲಿ ಇಂತಹ ಪ್ರಯೋಗಗಳನ್ನು ಇತರರೂ ಮಾಡಬಹುದು.