У нас вы можете посмотреть бесплатно ರೈತ ದಿನಾಚರಣೆ ಹಾಗೂ ಸಿರಿಧಾನ್ಯ ಹಬ್ಬ- ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಚಾಲನೆ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಜಿಲ್ಲಾಡಳಿತ, ಕೃಷಿ ಇಲಾಖೆ ವತಿಯಿಂದ ಚಾಮರಾಜನಗರದ ಆಯೋಜಿಸಿದ್ದ ರೈತ ದಿನಾಚರಣೆ ಹಾಗೂ ಸಿರಿಧಾನ್ಯ ಹಬ್ಬ ಕಾರ್ಯಕ್ರಮಕ್ಕೆ ರೇಷ್ಮೆ, ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಚಾಲನೆ ನೀಡಿದರು. ಇದೇ ವೇಳೆ ಸಿರಿಧಾನ್ಯ ಹಾಗೂ ಕೃಷಿ ಯಂತ್ರೊಪಕರಣಗಳ ಪ್ರದರ್ಶನ ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ. ಆರ್. ಕೃಷ್ಣಮೂರ್ತಿ, ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಕೃಷಿ ಇಲಾಖೆ ಉಪ ನಿರ್ದೇಶಕರಾದ ಶೃತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಬಳಿಕ ಕೆ. ವೆಂಕಟೇಶ್, ರೈತರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ದವಾಗಿದ್ದು, ರೈತರ ಶ್ರೇಯೋಭಿವೃದ್ಧಿಯೇ ಸರ್ಕಾರದ ಆದ್ಯತೆಯಾಗಿದೆ. ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಾ ರೈತಪರ ನಿಲುವು ಹೊಂದಿದೆ ಎಂದು ಹೇಳಿದರು. ಸಿ. ಪುಟ್ಟರಂಗಶೆಟ್ಟಿ, ರೈತರು ಇತರೆ ಬೆಳೆಗಳಂತೆ ಸಿರಿಧಾನ್ಯಗಳನ್ನು ಬೆಳೆಯಲು ಮಹತ್ವ ನೀಡಬೇಕು. ಇವುಗಳೊಂದಿಗೆ ಪಶುಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆಯಂತಹ ಉಪ ಕಸುಬುಗಳನ್ನು ಕೈಗೊಂಡು ಆರ್ಥಿಕ ಲಾಭ ಪಡೆಯಬಹುದಾಗಿದೆ ಎಂದು ಹೇಳಿದರು. ಎ. ಆರ್. ಕೃಷ್ಣಮೂರ್ತಿ, ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕೆ ಒತ್ತು ನೀಡುತ್ತಿದ್ದು, ಕೃಷಿ ಭಾಗ್ಯ, ರೈತ ಸಮೃದ್ಧಿ ಯೋಜನೆ, ಕೃಷಿ ಪರಿಕರಗಳ ಖರೀದಿಗೆ ಹೆಚ್ಚಿನ ಸಹಾಯಧನ ಸೇರಿದಂತೆ ಹಲವು ರೈತಪರ ಯೋಜನೆಗಳನ್ನು ಪರಿಚಯಿಸಿದೆ. ರೈತರು ಇಂತಹ ಯೋಜನೆಗಳ ಪ್ರಯೋಜನ ಪಡೆದು ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು. ಶೃತಿ, ಜಿಲ್ಲೆಯ ರೈತರಿಗೆ ಸಿರಿಧಾನ್ಯ ಉತ್ಪಾದನೆ, ಮೌಲ್ಯವರ್ಧನೆ, ಮಾರುಕಟ್ಟೆ ಅವಕಾಶಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಸಿರಿಧಾನ್ಯ ಪ್ರದರ್ಶನ ಆಯೋಜಿಸಲಾಗಿದೆ ಎಂದರು. *