У нас вы можете посмотреть бесплатно 2026-27ನೇ ಸಾಲಿನ ರಾಜ್ಯ ಆಯವ್ಯಯ ಮಂಡನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮಂಡನೆ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಅನ್ನು ಮಂಡಿಸುತ್ತಿದ್ದು, 17ನೇ ಬಜೆಟ್ ಮಂಡಿಸುವ ಮೂಲಕ ನೂತನ ದಾಖಲೆ ಬರೆದಿದ್ದಾರೆ. 17ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವುದು ತಮಗೆ ಸಂತಸದ ವಿಷಯ ಎಂದು ಬಜೆಟ್ ಪ್ರಾರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ಬಜೆಟ್ ಗಾತ್ರ 4.48 ಸಾವಿರ ಕೋಟಿ ಹೆಚ್ಚಳವಾಗಿದೆ. ಕಳೆದ ವರ್ಷಕ್ಕಿಂತ 40 ಸಾವಿರ ಕೋಟಿ ಹೆಚ್ಚಳ ಮಾಡಲಾಗಿದೆ. 3.40 ಲಕ್ಷ ಕೋಟಿ ರಾಜಸ್ವ ವೆಚ್ಚ, 74 ಸಾವಿರ 682 ಬಂಡವಾಳದ ವೆಚ್ಚ 35 ಸಾವಿರದ 316 ಕೋಟಿ ರೂಪಾಯಿ ಸಾಲ ಮರುಪಾವತಿಯಾಗಿದೆ. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯಾಗಿದೆ. ಕರ್ನಾಟಕದ 50ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ ಎಂದು ತಿಳಿಸಿದರು. 54 ಸಾವಿರದ 436 ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಿದ್ದು, ಕಾನೂನು ಚೌಕಟ್ಟಿನಡಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹೊಸ ಉದ್ಯೋಗ ಸೃಷ್ಟಿಗೆ ಹಲವು ಯೋಜನೆ ಜಾರಿಗೆ ತರಲಾಗಿದೆ. ವ್ಯಾಪಾರ , ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ರಸ್ತೆ, ಮೂಲಸೌಕರ್ಯಅಭಿವೃದ್ಧಿಗೆ 8 ಸಾವಿರದ 600 ಕೋಟಿ ರೂಪಾಯಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಸಾಲಿನಲ್ಲಿ 4 ಸಾವಿರ ಕೋಟಿ ರೂಪಾಯಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು. ಜನ ಕಲ್ಯಾಣಕ್ಕಾಗಿ ಹೂಡಿಕೆ ಮಾಡುತ್ತಿದ್ದೇವೆ. ಸಮಗ್ರ ಆರೋಗ್ಯ, ಸದೃಢ ರಾಜ್ಯ ಜನಸ್ನೇಹಿ ಆಡಳಿತ. ಕಾರ್ಮಿಕ ಕಲ್ಯಾಣಗಳು, ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಒತ್ತು. ಪ್ರವಾಸೋದ್ಯಮ ಆರ್ಥಿಕತೆ, ನವೀಕರಿಸಬೇಕಾದ ಇಂಧನ, ನಗರೀಕೇಂದ್ರಿತ ನಾಡಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. 2025-26ನೇ ಸಾಲಿನಲ್ಲಿ ಕೃಷಿ, ಶೇಕಡ 9.1, ಕೈಗಾರಿಕೆ 6.7, ಸೇವಾ ವಲಯ ಶೇಕಡ 8.1 ರಷ್ಟು ಬೆಳವಣಿಗೆ ದಾಖಲಿಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಉತ್ತಮ ಆರ್ಥಿಕ ಸ್ಥಿತಿಗತಿಯಲ್ಲಿ ರಾಜ್ಯ ಮುಂದುವರಿದಿದೆ . ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಐಟಿ-ಬಿಟಿ, ಸ್ಟಾರ್ಟ್ಆಪ್ ಸೇರಿದಂತೆ ಇತರೆ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆಯಾಗಿದ್ದು, ಕರ್ನಾಟಕವು ಸ್ನೇಹಪರ ಹೂಡಿಕೆ ರಾಜ್ಯ ಎಂದು ಎನಿಸಿದೆ ಎಂದರು. ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ 2026-27ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಇಲಾಖೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ ಮಾಡಲಾಗಿದೆ. ಇದು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ರಾಜ್ಯದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 28 ಸಾವಿರದ 608 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಿದೆ ಎಂದು ತಿಳಿಸಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ , ಇದು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು, ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಮಾಡಲಾಗಿದೆ. ಮಕ್ಕಳ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಬಳಸುವಂತಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಬಜೆಟ್ ಕ್ಷೇತ್ರವಾರು ಹಂಚಿಕೆ- ಪಶುಸಂಗೋಪನೆ-4,084 ಕೋಟಿ ಕೃಷಿ ಮತ್ತು ತೋಟಗಾರಿಕೆ-8,373 ಕೋಟಿ ಆಹಾರ,ನಾಗರೀಕ ಸರಬರಾಜು-7,942 ಕೋಟಿ ಲೊಕೋಪಯೋಗಿ -11,424 ಕೋಟಿ ಸಮಜಕಲ್ಯಾಣ ಇಲಾಖೆ-18,612 ಕೋಟಿ ಕಂದಾಯ ಇಲಾಖೆ- 19,845 ಕೋಟಿ ಆರೋಗ್ಯ ಕುಟುಂಬ ಕಲ್ಯಾಣ - 17,818 ಕೋಟಿ ಶಿಕ್ಚಣ ಇಲಾಖೆ- 47,224 ಕೋಟಿ ಮಹಿಳಾ ಮಕ್ಕಳ ಕಲ್ಯಾಣ -34,929ಕೋಟಿ ಇಂಧನ ಇಲಾಖೆ-29,947 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. #LiveDDChandanaNews #DDChandanaNews #DDChandana #DDKannada