У нас вы можете посмотреть бесплатно Vijayanagara || ಕುಡ್ಲಗಿ ತಾಲೂಕ ಹರವದಿ ಗ್ರಾಮ ಘಟಕ ಉದ್ಘಾಟನೆ ಕಾರ್ಯಕ್ರಮ. или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಹರವದಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕದ ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪ್ರಶಾಂತ ಸಾಗರ ಸ್ವಾಮಿಜಿ ಹಿರೇಮಠ, ಕೂಡ್ಲಿಗಿ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಹುಚ್ಚವನಳ್ಳಿ ಮಂಜುನಾಥ, ರಾಜ್ಯ ಪ್ರಧಾನ ಕಾರ್ಯದರ್ಶಿ ಕಾನಾಕಟ್ಟೆ ತಿಪ್ಪೇಸ್ವಾಮಿ, ಖಾನಹೊಸಳ್ಳಿ ಹೋಬಳಿ ಅಧ್ಯಕ್ಷರಾದ ಜೆ. ಮಾರಪ್ಪ ಸೇರಿದಂತೆ ಹರವದಿ ಗ್ರಾಮದ ಅನೇಕ ರೈತ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಸಂಘಟನೆಯ ಗ್ರಾಮ ಘಟಕಕ್ಕೆ ಎಂ. ವೀರಭದ್ರಪ್ಪ ಅವರನ್ನು ಅಧ್ಯಕ್ಷರಾಗಿ, ಕೆ. ಮಂಜುನಾಥ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಾಯಕರು, ರೈತರ ಹಕ್ಕುಗಳ ರಕ್ಷಣೆ, ಬೆಳೆ ಬೆಲೆ, ನೀರಾವರಿ ಸಮಸ್ಯೆ ಮತ್ತು ಸರ್ಕಾರದ ಯೋಜನೆಗಳು ರೈತರಿಗೆ ತಲುಪುವಂತೆ ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು. ಹರವದಿ ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಯಶಸ್ಸು ತಂದುಕೊಟ್ಟರು.ವರದಿ. ಎಂ. ಶಿಶುನಾಳ. ಷರೀಫ್. ಕನಕ ಟಿವಿ ವಿಜಯ ನಗರ. ಇಂತಹ ಮತ್ತಷ್ಟು ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಮತ್ತು ಸಬ್ಸ್ಕ್ರೈಬ್ ಮಾಡಿ.