У нас вы можете посмотреть бесплатно ಜಿಲ್ಲಾಮಟ್ಟದ ಉದ್ಯೋಗಕ್ಕೆ ಮೇಳ | ಸಚಿವ ಶರಣಬಸಪ್ಪ ದರ್ಶನಾಪುರ ಚಾಲನೆ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಜಿಲ್ಲಾಡಳಿತ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಯಾದಗಿರಿಯಲ್ಲಿ ನಿನ್ನೆ ಆಯೋಜಿಸಿದ್ದ ಜಿಲ್ಲಾಮಟ್ಟದ ಉದ್ಯೋಗಕ್ಕೆ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಚಾಲನೆ ನೀಡಿದರು. ಇದೇ ವೇಳೆ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು, ಉದ್ಯೋಗ ಪಡೆದ ಯುವಜನತೆಗೆ ನೇಮಕಾತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ದೂರದರ್ಶನದೊಂದಿಗೆ ಸಚಿವ ಶರಣಬಸಪ್ಪ ದರ್ಶನಾಪುರ, ಉದ್ಯೋಗ ಮೇಳಕ್ಕೆ ಸುಮಾರು 5 ಸಾವಿರ ಯುವಜನರು ನೋಂದಾಯಿಸಿಕೊಂಡಿದ್ದು, 50 ಕಂಪನಿಗಳು ಭಾಗವಹಿಸಿವೆ. ಜಿಲ್ಲೆಯ ಯುವ ಜನತೆಗೆ ವಿವಿಧ ಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಿಲ್ಲಾಡಳಿತ ಈ ಮೇಳವನ್ನು ಆಯೋಜಿಸಿದೆ ಎಂದು ತಿಳಿಸಿದರು. ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ನಿರುದ್ಯೋಗಿ ಯುವ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉದ್ಯೋಗ ಮೇಳ ಸಹಕಾರಿಯಾಗಿದ್ದು, ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಲವೀಶ್ ಒರಡಿಯಾ, ವಿವಿಧ ವಿದ್ಯಾರ್ಹತೆಗೆ ಅನುಗುಣವಾಗಿ ಕಂಪನಿಗಳು ಅವಕಾಶ ಒದಗಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು. ಉದ್ಯೋಗ ಪಡೆದ ಅಭ್ಯರ್ಥಿ ಸತೀಶ್, ಉದ್ಯೋಗಾವಕಾಶಕ್ಕಾಗಿ ದೂರದ ಬೆಂಗಳೂರು, ಹೈದರಾಬಾದ್ ,ಮುಂಬೈಗೆ ತೆರಳಬೇಕಾಗಿತ್ತು. ಆದರೆ ಈಗ ಯಾದಗಿರಿಯಲ್ಲಿಯೇ ಉದ್ಯೋಗ ದೊರೆತಿದ್ದು, ಸಂತಸ ತಂದಿದೆ ಎಂದರು. ಸೋನು, ಸರ್ಕಾರ ಇದೇ ರೀತಿಯ ಉದ್ಯೋಗ ಮೇಳ ಆಯೋಜಿಸುವ ಮೂಲಕ ಗ್ರಾಮೀಣ ಭಾಗದ ನಿರುದ್ಯೋಗಿ ಯುವ ಜನತೆಗೆ ಮತ್ತಷ್ಟು ನೆರವಾಗಬೇಕು ಎಂದು ಹೇಳಿದರು. #LiveDDChandanaNews #DDChandanaNews #DDChandana #DDKannada